ಭಾಷೆಯನ್ನು ಆಯ್ಕೆಮಾಡಿ :

ಕನ್ನಡ (Kannada)
HOME » NEWS »CORONAVIRUS-LATEST-NEWS » KEEP ALL POLITICAL WORK ASIDE HELP PEOPLE RAHULS MESSAGE TO PARTY WORKERS AMID COVID 19 CRISIS MAK

Rahul Gandhi: ಕಾಂಗ್ರೆಸ್ ಕಾರ್ಯಕರ್ತರು ರಾಜಕೀಯವನ್ನು ಬದಿಗಿಟ್ಟು ಜನರ ಸಹಾಯಕ್ಕೆ ನಿಲ್ಲಿ; ರಾಹುಲ್ ಗಾಂಧಿ ಮನವಿ

ಪಶ್ಚಿಮ ಬಂಗಾಳದಲ್ಲಿ ಇನ್ನೂ ಮೂರು ಹಂತಗಳ ಚುನಾವಣೆ ಇರುವಾಗಲೇ ಕೊರೋನಾ ಕಾರಣದಿಂದ ಏಪ್ರಿಲ್ 18 ರಂದು, ರಾಹುಲ್ ಗಾಂಧಿ ಅವರು ಪಶ್ಚಿಮ ಬಂಗಾಳದಲ್ಲಿ ನಡೆಯಲಿದ್ದ ಎಲ್ಲಾ ಸಾರ್ವಜನಿಕ ರ್‍ಯಾಲಿಗಳನ್ನು ರದ್ದುಗೊಳಿಸಿದ್ದರು.

ನವ ದೆಹಲಿ (ಏಪ್ರಿಲ್ 25);  ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಪ್ರತಿ ದಿನ ಮೂರು ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಗೋಚರಿಸಲು ಆರಂಭಿಸಿವೆ. ಈ ನಡುವೆ ಮುಂದಿನ‌ ತಿಂಗಳು ಕೊರೋನಾ ಇನ್ನಷ್ಟು ಹೆಚ್ಛಳ ಆಗಲಿದೆ, ಭಾರೀ ದುರ್ಘಟನೆ ಸಂಭವಿಸಲಿದೆ ಎಂಬ ಕರಾಳ ಭವಿಷ್ಯವೊಂದು ಕೇಳಿಬಂದಿದೆ. ಅಲ್ಲದೆ, ದೇಶದಲ್ಲಿ ತೀವ್ರ ಆಮ್ಲಜನಕದ ಬಿಕ್ಕಟ್ಟು ತಲೆದೋರಿದೆ. ಈ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ವ್ಯವಸ್ಥೆಯು ವಿಫಲವಾಗಿರುವ ಕಾರಣ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಮುಖಂಡರು ರಾಜಕೀಯ ಕೆಲಸ ಬಿಟ್ಟು ಸಾರ್ವಜನಿಕರಿಗೆ ಸಹಾಯ ಮಾಡುಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

Published by: MAshok Kumar
First published: April 25, 2021, 3:35 PM IST